ಬೆಂಗಳೂರು, (www.thenewzmirror.com) :
ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾದ ಘಟನೆ ಕೆಂಗೇರಿ ಬಳಿ ನಡೆದಿದೆ. ಘಟನೆ ನಡೆದಾಗ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಸಮೀಪ ಘಟನೆ ನಡೆದಿದ್ದು, ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ ಆಗಿದೆ.
4 ಅಡಿ ತಡೆಗೋಡೆಗೆ ಗುದ್ದಿ ನಂತರ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದ್ದು, ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಾತ್ರಿ 1.30 ರ ಸುಮಾರಿಗೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.