ಟಿಪ್ಪರ್ ಲಾರಿಗಳ ಬಳಸಿ ಸಿಗಂಧೂರು ಸೇತುವೆಯ ಭಾರ ತಡೆಯುವಿಕೆ ಪರೀಕ್ಷೆ

 

RELATED POSTS

ಶಿವಮೊಗ್ಗ(www.thenewzmirror.com):ಶರಾವತಿ ನದಿಯ ಹಿನ್ನೀರಿನ ಮೇಲೆ ನಿರ್ಮಿಸಲಾಗಿರುವ ರಾಜ್ಯದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆ ಮುಗಿಯುವ ಹಂತದಲ್ಲಿದ್ದು, ಸೇತುವೆಯ ಭಾರ ತಡೆಯುವಿಕೆ ಪರೀಕ್ಷೆ (ಲೋಡ್ ಟೆಸ್ಟಿಂಗ್) ನಡೆಸಲಾಗಿದೆ. ಸುಮಾರು 15 ಕ್ಕೂ ಅಧಿಕ ಭಾರ ಹೊತ್ತ ಟಿಪ್ಪರ್ ಲಾರಿಗಳನ್ನು ಸೇತುವೆ ಮೇಲೆ ಓಡಿಸಿ ಪರೀಕ್ಷಿಸಲಾಗಿದೆ.

ರಾಜ್ಯದಲ್ಲಿಯೇ ಅತೀ ಉದ್ದದ ಒಳನಾಡು ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಗಂದೂರು ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಸಣ್ಣಪುಟ್ಟ ಕೆಲಸ ಕಾರ್ಯಗಳು ನಡೆಯುತ್ತಿದ್ದು,ಕೊನೆಯ ಹಂತದ ಡಾಂಬರೀಕರಣ ಹಾಗೂ ಮೂರು ಕಡೆ ಸೇತುವೆ ಸೆಗ್ಮೆಂಟ್ ಅಂಚು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ.ಎಲ್ಲ ಅಂದುಕೊಂಡಂತೆ ನಡೆದರೆ ಜುಲೈ ತಿಂಗಳಲ್ಲಿ ಸೇತುವೆ ಲೋಕಾರ್ಪಣೆಗೊಳ್ಳುವ ಸಾಧ್ಯತೆಯಿದೆ. 

ಈ ಕುರಿತು ಮಾಹಿತಿ ನೀಡಿರುವ ಸಂಸದ ಬಿವೈ ರಾಘವೇಂದ್ರ ಸೇತುವೆಯ ಭಾರ ತಡೆಯುವಿಕೆ ಪರೀಕ್ಷೆ (ಲೋಡ್ ಟೆಸ್ಟಿಂಗ್) ನಡೆಸಲಾಗಿದೆ. 15 ಕ್ಕೂ ಅಧಿಕ ಭಾರ ಹೊತ್ತ ಟಿಪ್ಪರ್ ಗಳನ್ನು ಸೇತುವೆ ಮೇಲೆ ಓಡಿಸಿ ಪರೀಕ್ಷಿಸಲಾಗಿದೆ. ಇದು‘ಕರ್ನಾಟಕ ರಾಜ್ಯದ ಅತೀ ಉದ್ದದ ಒಳನಾಡು ಕೇಬಲ್ ಆಧಾರಿತ ಸೇತುವೆಯಾಗಿದೆ. 2. 25 ಕಿ.ಮೀ. ಉದ್ದದ ಎಕ್ಸಟ್ರಾ ಡೋಸ್ಡ್ ಬ್ಯಾಲೆನ್ಸ್’ಸ್ಡ್ ಕ್ಯಾಂಟಿಲಿವರ್ ಸೇತುವೆ ವಿನ್ಯಾಸ ಹೊಂದಿದೆ. ಸಂಪರ್ಕ ವ್ಯವಸ್ಥೆಯಲ್ಲಿ ಹೊಸ ಮೈಲುಗಲ್ಲಿಗೆ ಕಾರಣಕರ್ತರಾದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ’ ತಿಳಿಸಿದ್ದಾರೆ.

ಈ ಸೇತುವೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಅಂಬಾರಗೋಡ್ಲು ಮತ್ತು ತುಮರಿ ಗ್ರಾಮಗಳನ್ನು ಸಂಪರ್ಕಿಸುತ್ತದೆ. ಸಿಗಂದೂರು ಸೇತುವೆ ದೇಶದ ಎರಡನೇ ಅತೀ ಉದ್ದನೆಯ ಸೇತುವೆಯಾಗಲಿದೆ. 423 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗುತ್ತಿದೆ ಇದು 2.25 ಕಿ.ಮೀ. ಉದ್ದವಿದ್ದು, ಶರಾವತಿ ನದಿಯ ಪ್ರವಾಹ ತಡೆಯುವ ಸಾಮರ್ಥ್ಯ ಹೊಂದಿದೆ. 

ಲಾಂಚ್ ಸಂಚಾರ ಸಮಯ ಮುಗಿದ ನಂತರ ಸಿಗಂದೂರು ಅಥವಾ ತುಮರಿಯಿಂದ ಸಾಗರ ಪಟ್ಟಣಕ್ಕೆ ಬರಲು ಸುಮಾರು 80 ಕಿ.ಮೀ ಪ್ರಯಾಣಿಸಬೇಕಿತ್ತು. ಈ ಸೇತುವೆ ಪ್ರಯಾಣದ ಅವಧಿಯನ್ನು ಅರ್ಧದಷ್ಟು ಕಡಿಮೆ ಮಾಡಲಿದೆ. ಇದರ ಜೊತೆಯಲ್ಲಿ ಶಿವಮೊಗ್ಗ ಹಾಗೂ ಉಡುಪಿ ನಡುವಿನ ಸಂಪರ್ಕ ಮತ್ತಷ್ಟು ಸನಿಹವಾಗಲಿದೆ. ಹಾಗೆಯೇ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯ ಭೇಟಿ ಸುಲಭವಾಗಲಿದೆ. ಜೊತೆಗೆ ಶರಾವತಿ ಹಿನ್ನೀರು ಭಾಗದ ಸಂಪರ್ಕ, ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಲಿದೆ.

ಫೆಬ್ರವರಿ 19, 2018 ರಂದು ಈ ಸಿಗಂದೂರು ಸೇತುವೆಗೆ ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಡಿಪಾಯ ಹಾಕಿದ್ದರು. ಹಾಗಾಗಿ ಉದ್ಘಾಟನೆಗೂ ನಿತಿನ್ ಗಡ್ಕರಿ ಅವರನ್ನೇ ಕರೆಸಲು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮುಂದಾಗಿದ್ದಾರೆ. ಸಧ್ಯದಲಗಲೇ ದೆಹಲಿಗೆ ತೆರಳಿ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿ ಉದ್ಘಾಟನೆ ದಿನಾಂಕವನ್ನು ಬಿ.ವೈ. ರಾಘವೇಂದ್ರ ಅಂತಿಮ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. 

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist