ರಸಗೊಬ್ಬರ ಪೂರೈಕೆಯಲ್ಲಿ ವೈಫಲ್ಯ:ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

RELATED POSTS

ತುಮಕೂರು(www.thenewzmirror.com): ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಸಿದ್ದರೂ ರಾಜ್ಯ ಸರ್ಕಾರ ಸರಿಯಾಗಿ ರಸಗೊಬ್ಬರ ವಿತರಿಸದೆ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ರೈತರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಿತು.

ತುಮಕೂರು ಬಿ.ಜಿ.ಎಸ್. ವೃತ್ತದ ವರೆಗೆ ನಡೆಸ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಜನರು, ರೈತರು, ಕಾರ್ಯಕರ್ತರು ಭಾಗವಹಿಸಿದ್ದರು. ಕೇಂದ್ರ ಸರಕಾರವು ಸಮರ್ಪಕವಾಗಿ ರಸಗೊಬ್ಬರ ನೀಡಿದ್ದರೂ ಅದನ್ನು ರೈತರಿಗೆ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಮುಖಂಡರು ಆಕ್ಷೇಪಿಸಿದರು. ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,ರಾಜ್ಯ ಸರಕಾರದ ಕೃಷಿ ಸಚಿವರ ಅವಿವೇಕತನದಿಂದ ರೈತರು ರಸಗೊಬ್ಬರಕ್ಕಾಗಿ ಹೋರಾಟ ಮಾಡುವ ಸ್ಥಿತಿ ಬಂದಿದೆ. ರೈತಪರವಾಗಿ ಬಿಜೆಪಿ ಹೋರಾಟ ಮಾಡುತ್ತಿದೆ.ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಇಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರೈತರ ಕಣ್ಣೀರು ಒರೆಸಲು ಈ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರೈತರ ಕಣ್ಣೀರು ಒರೆಸದ ಸರಕಾರಕ್ಕೆ ರಾಜ್ಯದಲ್ಲಿ ಉಳಿದಿಲ್ಲ ಎಂದು ಅವರು ಎಚ್ಚರಿಸಿದರು. ರೈತರ ಕಣ್ಣಲ್ಲಿ ನೀರು ಬರಿಸಿದರೆ ಆ ಮುಖ್ಯಮಂತ್ರಿಗಳಿಗೆ ಒಳ್ಳೆಯದಾಗಿಲ್ಲ. ರೈತರನ್ನು ದುಸ್ಥಿತಿಗೆ ತಂದ ಕೃಷಿ ಸಚಿವರಿಗೂ ಒಳ್ಳೆಯದಾಗದು ಎಂದು ನುಡಿದರು. ಹವಾಮಾನ ಇಲಾಖೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದರು ಎಂದು ಟೀಕಿಸಿದರು.

ರಾಹುಲ್, ಸೋನಿಯಾ ಮನೆ ಗೇಟ್ ಬಳಿ ಕಾಯುವ ಸಿಎಂ, ಡಿಸಿಎಂ:

ಕೃಷಿ ಸಚಿವರೂ ಎಲ್ಲ ಜಿಲ್ಲೆಗಳಿಗೆ ಹೋಗಿ ವಾಸ್ತವಿಕ ಪರಿಸ್ಥಿತಿ ಅರ್ಥ ಮಾಡಿಕೊಂಡಿಲ್ಲ. ಮುಖ್ಯಮಂತ್ರಿಗಳೂ ಜಿಲ್ಲಾಧಿಕಾರಿಗಳ ಜೊತೆ ಸಮಗ್ರ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಿಂಗಳಿಗೆ 4 ಬಾರಿ ದೆಹಲಿಗೆ ಹೋಗಿ ಕುಳಿತುಕೊಳ್ಳುತ್ತಾರೆ. ಪ್ರಧಾನಮಂತ್ರಿ ಮೋದಿ, ಸಂಬಂಧಿತ ಸಚಿವರನ್ನು ಭೇಟಿ ಮಾಡದೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರ ಮನೆಯ ಗೇಟ್ ಬಳಿ ಕಾಯುತ್ತಿರುತ್ತಾರೆ ಎಂದು ಟೀಕಿಸಿದರು. ಪ್ರತಿ ತಿಂಗಳಿಗೆ 4 ಬಾರಿ ದೆಹಲಿಗೆ ಹೋಗಿ ಕುಳಿತುಕೊಂಡರೆ ರಾಜ್ಯದ ಆಡಳಿತ ನಡೆಸುವವರು ಯಾರು ಎಂದು ಕೇಳಿದರು. ರೈತ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ರೈತರ ಕಣ್ಣೊರೆಸಲು ಸದಾ ಮುಂದಾದವರು ಎಂದು ವಿವರಿಸಿದರು.

ಪಕ್ಷದ ಮುಖಂಡರು ಮಾತನಾಡಿ, ಇದು ರೈತ ವಿರೋಧಿ ಸರಕಾರ. ಹಗರಣಗಳ ಸರಕಾರ ಎಂದು ಟೀಕಿಸಿದರು.ರೈತರ ಕುರಿತು ಜವಾಬ್ದಾರಿಯಿಂದ ಮಾತನಾಡದೆ ಕೇಂದ್ರವನ್ನು ದೂಷಿಸಿದರೆ ಒಳ್ಳೆಯದಾಗದು ಎಂದು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist