ಬೆಂಗಳೂರು(www.thenewzmirror.com): ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಓರ್ವನ ಹತ್ಯೆಯಾಗಿದೆ,ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.