ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

RELATED POSTS

ಬೆಂಗಳೂರು(www.thenewzmirror.com):ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಅವರು, ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ದತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅತ್ಯಂತ ದುಖದ ಸಂಗತಿ, ಯಾವುದೇ ಪೂರ್ವ  ತಯಾರಿ ಇಲ್ಲದೆ ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದು, ಅದರಲ್ಲೂ ಎರಡೂ ಕಾರ್ಯಕ್ರಮಗಳಲ್ಲಿ ಅಷ್ಡೊಂದು ಜನ ಸೇರಲು ಅವಕಾಶ ಮಾಡಿಕೊಟ್ಟಿದ್ದು, ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ಎಂದಿದ್ದಾರೆ.

ಹಿಂದೆ ವಿಶ್ವ ಕಪ್ ಮತ್ತು ಇತರ  ಕಪ್ ಗೆದ್ದಾಗ ಮುಂಬೈನಲ್ಲಿ ಮೆರವಣಿಗೆ ಮಾಡುವ ಮುಖಾಂತರ ಜನರಿಗೆ ಅಲ್ಲಲ್ಲಿ‌  ಕ್ರಿಕೆಟ್ ಆಟಗಾರರನ್ನು ನೋಡಲು ಅವಕಾಶ ಕಲ್ಪಿಸಿದ್ದು ಸಾಕಷ್ಟು ಉದಾಹರಣೆ ಇದೆ.ಈ ವಿಚಾರದಲ್ಲಿ ಜನರ ಸಂಖ್ಯೆಯ ಅಂದಾಜು ಇಲ್ಲದೆ ಆರ್ ಸಿಬಿ ಪರವಾಗಿರುವ ಜನರ ಭಾವನಾತ್ಮಕ ಸಂಬಂಧ ಅರಿಯದೆ ಪೊಲಿಸರು ಮತ್ರು ಆಯೋಜಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಸ್ಪಷ್ಟ. ರಾಜ್ಯ ಸರ್ಕಾರವೇ ಇದಕ್ಕೆ ಕಾರಣ ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ತಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist