ಅಲ್ಪಸಂಖ್ಯಾತರಿಗೆ ಮೀಸಲು ಹೆಚ್ಚಿಸಿದ್ದು ಕೇಂದ್ರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

RELATED POSTS

ಉಡುಪಿ(www.thenewzmirror.com): ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು‌. 

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರು, ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರು. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರು. ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ದೂರಿದರು. 

ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 

ಬಿಜೆಪಿ ಶಾಸಕರ ಆಕ್ಷೇಪಕ್ಕೆ ಸಚಿವರ ತಿರುಗೇಟು:

ಒಂದು ಕಡೆ ಬಿಜೆಪಿ ಕೋಮುವಾದವನ್ನು ಪ್ರಚೋದನೆ ಮಾಡುತ್ತದೆ. ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ.‌ ಇಂಥ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಅವರ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಸಚಿವರು ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಕಿಡಿ ಕಾರಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist