ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿಗಲಿದೆ ತರಬೇತಿ..!

ವಿದ್ಯಾರ್ಥಿಗಳ ಉನ್ನತೀಕರಣ ದೃಷ್ಟಿಯಿಂದ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಶನ್ (IIPA) ಸಂಸ್ಥೆಯು ಪರಸ್ಪರ ಒಡಂಬಡಿಕೆಗೆ ಸಹಿ ಹಾಕಿದೆ. ವಿಶ್ವ ವಿದ್ಯಾಲಯ ಕುಲಪತಿ ಡಾ.ಜಯಕರ ಎಸ್ ಎಂ ಮತ್ತು IIPA – KRB ಸಂಸ್ಥೆ ಅಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ಡಾ.ಟಿ.ಎಮ್.ವಿಜಯ ಭಾಸ್ಕರ್ ಒಡಂಬಡಿಕೆಗೆ ಇಂದು ಸಹಿ ಹಾಕಿದರು.

RELATED POSTS

ಈ ಒಡಂಬಡಿಕೆಯ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಮಾಡುವ ಕಾರ್ಯಕ್ರಮಗಳನ್ನು ಜಂಟಿಯಾಗಿ ಹಮ್ಮಿಕೊಳ್ಳಲಿದೆ. ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ನೀತಿ ನಿಯಮ,ಕಾನೂನಿನ ಅರಿವು ಮೂಡಿಸುವುದು, ಸರ್ಕಾರದ ಕಾರ್ಯ ಚಟುವಟಿಕೆಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಶನ್ ಮಾಡಲಿದೆ.

ಅಲ್ಲದೇ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ತರಭೇತಿಯನ್ನು ಈ ಒಡಂಬಡಿಕೆಯ ಭಾಗವಾಗಿ ಮಾಡಲಾಗುವುದು.ಅತಿ ಮುಖ್ಯವಾಗಿ ಸರ್ಕಾರ ಮತ್ತು ವಿಶ್ವವಿದ್ಯಾಲಯದ ನಡುವೆ ಕೊಂಡಿಯಾಗಿ IIPA – KRB ಕೆಲಸ ಮಾಡಲಿದೆ.

ಒಡಂಬಡಿಕೆಯ ಬಗ್ಗೆ ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಎಸ್ ಎಂ ಸಂತಸ ವ್ಯಕ್ತಪಡಿಸಿದ್ದಾರೆ. ಈ ಒಡಂಬಡಿಕೆ ವಿಶ್ವವಿದ್ಯಾಲಯ ಮಟ್ಟಿಗೆ ಸಾಕಷ್ಟು ಮಹತ್ವದಾಯಕವಾಗಿದೆ. ಬಹುತೇಕ ವಿದ್ಯಾರ್ಥಿಗಳ ಗ್ರಾಮೀಣ ಭಾಗಕ್ಕೆ ಸೇರಿದ್ದಾರೆ,ಈ ಒಡಂಬಡಿಕೆ ಮೂಲಕ ವಿದ್ಯಾರ್ಥಿಗಳಿಗೆ ನುರಿತ ತಜ್ಞರಿಂದ ಸೂಕ್ತ ತರಬೇತಿ ಸಿಗಲಿದೆ ಹಾಗೆನೇ ವಿದ್ಯಾರ್ಥಿಗಳ ಗುಣಮಟ್ಟ ಹೆಚ್ಚಾಗಲಿದೆ ಎಂದು ಇದೇ ವೇಳೆ  ತಿಳಿಸಿದರು.

ಕುಲಸಚಿವ ಶೇಕ್ ಲತೀಫ್ ಕೆಎಎಸ್,IIPA- KRB ಕಾರ್ಯದರ್ಶಿ ಡಾ.ಜೀವನ್ ಕುಮಾರ್,ಸುರೇಂದ್ರ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಒಡಂಬಡಿಕೆಯಿಂದ ಆಗುವ ಅನುಕೂಲಗಳು

–  ಕಾರ್ಯಗಾರ ಹಮ್ಮಿಕೊಳ್ಳುವುದು
–  ಜಂಟಿ ಯೋಜನೆಗಳು
– ಸರ್ಟಿಫಿಕೇಟ್ ಕೋರ್ಸ್ ನಡೆಸುವುದು
– ಸ್ಪರ್ಧಾತ್ಮಕ ಪರೀಕ್ಷೆಗಳ ತರಭೇತಿ
– ಸಹಭಾಗಿತ್ವಡಿ ವಿದ್ಯಾರ್ಥಿಗಳ ಶ್ರೇಯೊಭಿವೃದ್ದಿ
– ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist