ಬೆಂಗಳೂರು,(www.thenewzmirror.com);
ಹೆಬ್ಬಾಳ ರಸ್ತೆ ಬದಿಯಿರುವ ಯಮಹ ಶೋರೂಂ ರವರು ತ್ಯಾಜ್ಯವನ್ನು ರಸ್ತೆ ಬದಿ ಬಿಸಾಡುವುದನ್ನು ಗಮನಿಸಿ, ಸ್ವಚ್ಛತೆ ಕಾಪಾಡದ ಶೋರೂಂ ಗೆ 5000 ರೂ. ದಂಡ ವಿಧಿಸಲು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿದರು. ಮುಖ್ಯ ಆಯುಕ್ತರ ಸೂಚನೆ ಮೇರೆಗೆ ಮಾರ್ಷಲ್ ಕಡೆಯಿಂದ ಸ್ಥಳದಲ್ಲೇ 5000 ರೂ. ದಂಡ ವಸೂಲಿ ಮಾಡಲಾಯಿತು.
ಹೆಬ್ಬಾಳ ಮೇಲ್ಸೇತುವೆಯ ಬಳಿ ಇಂದು ಪಾದಚಾರಿ ಮಾರ್ಗ ಹಾಗೂ ಸ್ವಚ್ಛತೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆಯ ವೇಳೆ, ನಗರದಲ್ಲಿ ರಸ್ತೆ ಬದಿ ಕಸ ಬಿಸಾಡದಂತೆ ಸೂಕ್ತ ಕ್ರಮಗಳನ್ನು ಕೈಗೊಂಡು ಕಸ ಬಿಸಾಡುವವರ ಮೇಲೆ ನಿಗಾವಹಿಸಿ ಅಂತಹವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿಯ ಪಾದಚಾರಿ ಮಾರ್ಗ ಪರಿಶೀಲಿಸಿ, ಪಾದಚಾರಿಗಳ ಓಡಾಟಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಪಾದಚಾರಿ ಮಾರ್ಗವನ್ನು ನಿರ್ಮಾಣ ಮಾಡಬೇಕು. ದುರಸ್ತಿಯಾಗಿರುವ ಕಡೆ ಕೂಡಲೇ ಅದನ್ನು ಸರಿಪಡಿಸಲು ಸೂಚಿಸಿದರು.
ಹೆಬ್ಬಾಳದ ಅಮೃತ್ ಸಾಗರ್ ಹೋಟೆಲ್ ಬಳಿಯ 4ನೇ ಮುಖ್ಯ ರಸ್ತೆಯಲ್ಲಿ ಕಸ ಬಿಸಾಡುವ ಸ್ಥಳ (ಬ್ಲಾಕ್ ಸ್ಪಾಟ್) ವನ್ನು ಗಮನಿಸಿ ಕೂಡಲೆ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಅಧಿಕಾರಿಗಳು ಕೂಡಲೇ ಆಟೋ ಟಿಪ್ಪರ್ ತಂದು ತ್ಯಾಜ್ಯ ವಿಲೇವಾರಿ ಮಾಡಿ ಸ್ವಚ್ಚಗೊಳಿಸಿದರು.
9448197197 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ
ನಗರದ ಸ್ವಚ್ಛತೆಯ ದೃಷ್ಟಿಯಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತವು ದೂರು ಕೇಂದ್ರ ಸ್ಥಾಪಿಸಿದ್ದು, ಅದಕ್ಕಾಗಿ ಪ್ರತ್ಯೇಕ ವ್ಯಾಟ್ಸಪ್ ಸಂಖ್ಯೆಯನ್ನು 9448197197 ನೀಡಿದೆ. ಈ ಸಂಖ್ಯೆಗೆ ಛಾಯಾಚಿತ್ರದೊಂದಿಗೆ ಸಂದೇಶ ಕಳುಹಿಸುವ ಮೂಲಕ ದೂರು ದಾಖಲಿಸಬಹುದು. ಆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತ್ಯಾಜ್ಯ ಅಥವಾ ಕಸ ವಿಲೇವಾರಿ ಮಾಡಿ ಸಮಸ್ಯೆ ಬಗೆಹರಿಸಿರುವ ಕುರಿತು ಮಾಹಿತಿ ನೀಡಲಿದ್ದಾರೆ.