ಬೆಂಗಳೂರು, (www.thenewzmirror.com);
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾಧರ್ನರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲಂಗಾಣ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಅಷ್ಟೇ ಅಲ್ದೆ ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗದಂತೆ ಸೂಚನೆ ಮಾಡಿದೆ.
ಯಾವಾಗ ಜನಾರ್ಧನ ರೆಡ್ಡಿಗೆ ಶಿಕ್ಷೆ ಪ್ರಕಟವಾಯ್ತೋ ಪತಿ ಬಂದ ಸಂಕಷ್ಟಗಳೆಲ್ಲಾ ಆದಷ್ಟು ಬೇಗ ಪರಿಹಾರವಾಗ್ಲಿ ಅಂತ ಜನಾರ್ಧನರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ರಾಜ್ಯದ ಮತ್ತು ಹೊರ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಅದಕ್ಕೀಗ ಫಲ ಸಿಕ್ಕಿದಂತಾಗಿದೆ.







ತಮ್ಮಪತಿಗೆ ಶಿಕ್ಷೆಯಿಂದ ಬಿಡುಗಡೆ ದೊರೆಯಲಿ ಎಂದು ಲಕ್ಷ್ಮಿ ಅರುಣಾ ಆನೆಗುಂದಿಯ ಅಂಜನಾದ್ರಿ ಬೆಟ್ಟದ ಆಂಜನೇಯನಿಗೆ ಪೂಜೆ ಸಲ್ಲಿಸಿ, ಪಟ್ಟಾನಬಿರಾಮನ ದೇವಸ್ಥಾನದಲ್ಲಿ ರಾಮಾಯಣದ ಸುಂದರಕಾಂಡದ ಕೋಟಿ ಬರಹಕ್ಕೆ ಸಂಕಲ್ಪ ಮಾಡಿದ್ದರು. ಹಾಗೆನೇ ಉಡುಪಿಯ ಕೃಷ್ಣನ ದರ್ಶನ ಪಡೆದು, ಪುತ್ತಿಗೆ ಶ್ರೀಗಳ ಆಶೀರ್ವಾದ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಶತ್ರು ಹಾಗೂ ಸಂಕಷ್ಟಗಳ ನಿವಾರಣೆಗಾಗಿ ಹೋಮವನ್ನೂ ಮಾಡಿಸಿದ್ರು. ಹಾಗೆನೇ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು.
ಇಷ್ಟಾರ್ಥವನ್ನು ಪೂರೈಸುವ ಅಸ್ಸಾಂನ
ಕಾಮಾಖೀನಿ ದೇವಿಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಅದೀಗ ಫಲ ಕೊಟ್ಟಿದ್ದು, ತೆಲಂಗಾಣ ಹೈಕೋರ್ಟ್ ಶಿಕ್ಷೆಗೆ ತಡೆಯಜ್ಞೆ ನೀಡಿದೆ.
ಕುಟುಂಬದ ಸದಸ್ಯರು ಮತ್ತು ಆತ್ಮೀಯ ಸ್ನೇಹಿತರು ಅಂತರನ್ನು ಕಾಯ್ದುಕೊಂಡಿದ್ದ ಸಂದರ್ಭದಲ್ಲಿ ಲಕ್ಷ್ಮಿ ಅರುಣ ಜನಾರ್ದನ್ ರೆಡ್ಡಿ ಎದೆಗುಂದದೆ ಕಾರ್ಯಕರ್ತರಲ್ಲಿ ಹುಮ್ಮಸ್ಸನ್ನು ಮೂಡಿಸಿ, ಸ್ವತಹ ಪ್ರತಿಯೊಂದು ದೇವಸ್ಥಾನಕ್ಕೆ ಹೋಗಿ ಪೂಜೆ ಹವನಗಳನ್ನು ಮಾಡಿ ಪತಿಯ ಬಿಡುಗಡೆಗಾಗಿ ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದರು.
ಕಳೆದ ತಿಂಗಳು ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ಅಂತಿಮ ತೀರ್ಪು ನೀಡಿ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು.ಜನಾರ್ದನ ರೆಡ್ಡಿ ಜತೆಗೆ, ಶ್ರೀನಿವಾಸ್ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಕೂಡ ತಪ್ಪಿತಸ್ಥರೆಂದು ಸಾಬೀತಾಗಿತ್ತು. ತೀರ್ಪು ಪ್ರಶ್ನಿಸಿ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದರು.