ಸಿಎಎ(CAA) ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ, ಬದಲಾಗಿ ಪೌರತ್ವ ನೀಡುವುದು ; ಅದನ್ನ ಜಾರಿಗೆ ತರೋದು ಶತಃಸಿದ್ಧ..!

ಬೆಂಗಳೂರು, (www.thenewzmirror.com);

ಸಿಎಎ(CAA) ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ, ಬದಲಾಗಿ ಪೌರತ್ವ ನೀಡುವುದಾಗಿದೆ. ಅಷ್ಟೇ ಅಲ್ಲದೇ ಅದನ್ನ ಜಾರಿಗೊಳಿಸುವುದು ಶತಃಸಿದ್ಧ ಅಂತ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

RELATED POSTS

ಅಜೆಂಡಾ ಆಜ್ ತಕ್ ವೇದಿಕೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾ, ಸಿಎಎ ಬಗ್ಗೆ ಇದ್ದ ಗೊಂದಲವನ್ನ ಮತ್ತೊಮ್ಮೆ ಬಗೆಹರಿಸಿದರು. ಭಾರತದ ರಾಜಕೀಯ ರಂಗದಲ್ಲಿ ಚಾಣಾಕ್ಷ ಎಂದೇ ಪರಿಗಣಿಸಲ್ಪಟ್ಟಿರುವ ಶಾ, ವಿಭಜನೆಯ ನಂತರ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸಿದ ಹಿಂದೂಗಳು ಸೇರಿದಂತೆ ಆರು ಧರ್ಮಗಳ ಅನುಯಾಯಿಗಳಿಗೆ ನ್ಯಾಯವನ್ನು ತಲುಪಿಸಲು ಅಂಂ ಒಂದು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

CAA ವಿರುದ್ಧ ನಡೆದ ಪ್ರತಿಭಟನೆ

ಅಜೆಂಡಾ ಆಜ್ ತಕ್ ನ ರಾಷ್ಟ್ರೀಯ ವೇದಿಕೆಯ ಚರ್ಚೆಯಲ್ಲಿ, ಸಿಎಎ ನಿಜಕ್ಕೂ ಈ ದೇಶದ ಕಾನೂನು ಮತ್ತು ಅದರ ಅನುಷ್ಠಾನ ಅತ್ಯಗತ್ಯ ಎಂದು ಒತ್ತಿ ಹೇಳಿದರು. ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಜಗತ್ತಿಗೆ ತಿಳಿದಿದೆ, ಆದರೆ ವಿಶ್ಲೇಷಕರು ಅದನ್ನು ತಪ್ಪಾಗಿ ಚಿತ್ರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು, ಇದು ಅವರ ಪೌರತ್ವವನ್ನು ಕಳೆದುಕೊಳ್ಳಲು ಕಾರಣವಾಗುತ್ತದೆ ಎಂದು ಪುಕಾರು ಹಬ್ಬಿಸಿದರು. ಸಿಎಎ ಯಾರ ಪೌರತ್ವದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರಲ್ಲದೇ ಇದು ಪೌರತ್ವವನ್ನು ನೀಡುವ ಕಾನೂನು ಎಂದರು. ರಾಷ್ಟ್ರದ ಹಿತಕ್ಕಾಗಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸುವ ಮೂಲಕ ಸರಿಯಾದ ಸಮಯದಲ್ಲಿ ಅದನ್ನು ಜಾರಿಗೊಳಿಸಲಾಗುವುದು ಎಂಬ ಸುಳಿವು ನೀಡಿದರು.

ಮೋದಿ-ಶಾ ಜೋಡಿ ತಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿಯನ್ನು ಬಯಸಿ ಸತತವಾಗಿ ಈ ದೇಶಕ್ಕಾಗಿ ದುಡಿದಿದ್ದಾರೆ ಎನ್ನುವುದಕ್ಕೆ ಸಾರ್ವಜನಿಕರು ಸಾಕ್ಷಿಯಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನಗಳ ಇತ್ತೀಚಿನ ಚುನಾವಣೆಗಳಲ್ಲಿ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅದ್ಭುತ ವಿಜಯಗಳು 2024 ರಲ್ಲಿ ಭಾಜಪದ ನಿರ್ಣಾಯಕ ಗೆಲುವಿನ ಸಾಧ್ಯತೆಯನ್ನು ಸೂಚಿಸುತ್ತಾ, ಮತ್ತೊಮ್ಮೆ ನರೇಂದ್ರ ಮೋದಿಯವರ ಪ್ರಧಾನಿ ಸ್ಥಾನವನ್ನು ಭದ್ರಪಡಿಸಿವೆ ಎಂದರು.

ಯಾವಾಗಲೂ ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಹಿಂದಿರಿಸಿ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ, ಭಾರತ ಮಹತ್ವದ ಪ್ರಗತಿಯನ್ನು ಸಾಧಿಸಿದನ್ನು ಜನರು ಗಮನಿಸಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ, ಮೋದಿಯವರ ಮಾರ್ಗದರ್ಶನ ಮತ್ತು ಅಮಿತ್ ಶಾ ಅವರ ನುರಿತ ಮಾರ್ಗದರ್ಶನದಲ್ಲಿ, ದಲಿತರು, ಆದಿವಾಸಿಗಳು ಮತ್ತು ಹಿಂದುಳಿದವರನ್ನು ಸಮ್ಮಾನದ ಮೂಲಕ ಸಮಾಜದ ಮುಖ್ಯವಾಹಿನಿಗೆ ಸಂಪರ್ಕಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪ್ರವೀಣ ಮಾರ್ಗದರ್ಶನದಲ್ಲಿ, ಬಿಜೆಪಿ ಸರ್ಕಾರವು ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕಾರ್ಯರೂಪಕ್ಕೆ ತರಲಿದೆ ಎಂಬುದು ಖಚಿತವಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist