ವ್ಯಾಪಕ ಮಳೆ: ಹೊಸನಗರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Due to incessant rains, schools are closed today across Bangalore city district

RELATED POSTS

ಶಿವಮೊಗ್ಗ(www.thenewzmirror.com): ಜಿಲ್ಲೆಯಾದ್ಯಂತ ಮುಂಗಾರು ಚುರುಕಾಗಿದ್ದು, ಹೊಸನಗರ ತಾಲ್ಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ  ಮುಂಜಾಗ್ರತ ಕ್ರಮವಾಗಿ ಇಂದು ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹೊಸನಗರ ತಾಲ್ಲೂಕಿನಲ್ಲಿ ತೀವು ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ಹಾಗೂ ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು

ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಆದೇಶಿಸಿದ್ದಾರೆ.

ಇನ್ನು ರಜೆ ಘೋಷಣೆ ತಡವಾಗಿದ್ದರಿಂದ ಬೆಳಗಿನ ತರಗತಿಗಳಿಗೆ ಹಾಜರಾಗಲು ಮಕ್ಕಳು ಶಾಲೆಗಳಿಗೆ ತೆರಳಿದ್ದು ರಜೆ ಘೋಷಣೆ ಕಾರಣದಿಂದ ವಾಪಸ್ಸಾದರು, ರಜೆ ಬಗ್ಗೆ ತಡವಾಗಿ ಘೋಷಣೆ ಹೊರಬಿದ್ದ ಕಾರಣ ಮಕ್ಕಳಿಗೆ ಪೋಷಕರಿಗೆ ಸಕಲಾದಲ್ಲಿ ಮಾಹಿತಿ ಸಿಗದೆ ಮಕ್ಕಳನ್ನು ಶಾಲೆಗೆ ಕಳಿಸಿ ಮರಳಿ ಕರೆದೊಯ್ಯುವಂತಾಯಿತು ಹೀಗಾಗಿ ರಜೆ ಘೋಷಣೆ ತಡವಾಗಿ ಮಾಡದಂತೆ ಪೋಷಕರು ವಿದ್ಯಾರ್ಥಿಗಳು ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist