Good News | ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲಿದೆ ಬಟ್ಟೆಯ ಕೈ ಚೀಲ..! , ಸ್ವಯಂ ಚಾಲಿತ ಚೀಲ ನೀಡುವ ಯಂತ್ರಕ್ಕೆ ಚಾಲನೆ..!

ಬೆಂಗಳೂರು, (www.thenewzmirror.com) ;

ಪರಿಸರಕ್ಕೆ ಮಾರಕವಾಗಿರುವ ವಸ್ತುಗಳನ್ನ ತ್ಯಜಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನ ಇಟ್ಟಿದೆ. ಇದಕ್ಕೆ ಪೂರಕ ಎನ್ನುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸ್ವಯಂ ಚಾಲಿತವಾಗಿ ಬಟ್ಟೆಯ ಕೈ ಚೀಲ ನೀಡುವ ಯಂತ್ರಕ್ಕೆ ಪರಿಸರ ಸಚಿವ ಈಶ್ವರ್ ಖಂಡ್ರೆ ಚಾಲನೆ ಕೊಟ್ಟಿದ್ದಾರೆ.

RELATED POSTS

ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯ ಮೊದಲ ಹೆಜ್ಜೆಯಾಗಿದೆ. ಏಕ ಬಳಕೆ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ಕೊಟ್ಟರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ. ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರದಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist