ಪ್ರಶಸ್ತಿ ನೀಡಿಕೆ ವಿಚಾರದಲ್ಲಿ ರಾಜಕೀಯ ಮಾಡಲ್ಲ: ಸಚಿವ ಶಿವರಾಜ್ ತಂಗಡಗಿ

RELATED POSTS

ಬೆಂಗಳೂರು(www.thenewzmirror.com):ಪ್ರಶಸ್ತಿ ನೀಡಿಕೆ ವಿಚಾರದಲ್ಲಿ  ನಮ್ಮ ಸರ್ಕಾರ ಎಂದಿಗೂ  ರಾಜಕೀಯ ಮಾಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. 

ರವೀಂದ್ರಕಲಾ ಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಹಾಗೂ  ದೀಪಾ ಭಾಸ್ತಿ ಅವರನ್ನು ಸನ್ಮಾನಿಸಿ, ತಲಾ ಹತ್ತು ಲಕ್ಷ ನಗದು ಬಹುಮಾನ ವಿತರಿಸಿ ಅವರು ಮಾತನಾಡಿದರು. 

ಹಿಂದಿನ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡದೆ ಹಾಗೆಯೇ ಕೈ ಬಿಟ್ಟಿತ್ತು. ಪುಸ್ತಕ ಪ್ರಾಧಿಕಾರ ವತಿಯಿಂದ ನೀಡುವ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಪ್ರಶಸ್ತಿ ಪ್ರದಾನ ಮಾಡಿರಲಿಲ್ಲ. ಆದರೆ ನಾವು ಅಕಾಡೆಮಿ ಅಧ್ಯಕ್ಷರು ಹಿಂದಿನ ಸರ್ಕಾರ ಆಯ್ಕೆ ಮಾಡಿದ್ದ ಸಾಧಕರಿಗೆ 2021ನೇ ಸಾಲಿನ ಪ್ರಶಸ್ತಿಯನ್ನು ನೀಡಿದ್ದೇವೆ. ನಾವು ಯಾವುದೇ ಮಧ್ಯ ಪ್ರವೇಶ ಮಾಡಿಲ್ಲ ಎಂದು ತಿಳಿಸಿದರು. 

ಅಕಾಡೆಮಿ ಪ್ರಾಧಿಕಾರಿಗಳಿಗೆ ಅಧ್ಯಕ್ಷರು ಮತ್ತು ನಿರ್ದೇಶಕರ ನೇಮಕವಾದ ಬಳಿಕ ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳಿಗೆ ತೀವ್ರ ವೇಗ ದೊರಕಿದೆ. ನಾಡಿನ ಸಾಂಸ್ಕೃತಿಕ ವಿಚಾರದಲ್ಲಿ ನಮ್ಮ ಮುಖ್ಯಮಂತ್ರಿಗಳು ಹಾಗೂ ನಾನು ಒಂದು ಹೆಜ್ಜೆ ಮುಂದೆ ಹೋಗಿ ಕೆಲಸ ಮಾಡುತ್ತಿದ್ದೇವೆ. ಸುವರ್ಣ ಸಂಭ್ರಮ ಕಾರ್ಯಕ್ರಮ, ಭುವನೇಶ್ವರಿ ಪ್ರತಿಮೆ ಸ್ಥಾಪನೆಯಿಂದ ಹಿಡಿದು ಪ್ರತಿಯೊಂದು ಕಾರ್ಯದಲ್ಲೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಮಗೆ ಸಂಪೂರ್ಣ ಸಹಕಾರ ನೀಡಿದ್ದು, ಇಲಾಖೆಗೆ ಕೇಳಿದಾಗೆಲ್ಲ ಹೆಚ್ಚಿನ ಅನುದಾನ ಒದಗಿಸುತ್ತಿದ್ದಾರೆ ಎಂದರು. 

ಇನ್ನು ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರು ನಾಡಿನ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿರುವುದು ನಮ್ಮೆಲ್ಲರ ಹೆಮ್ಮೆ. ಬರಹ ಒಂದು ದೊಡ್ಡ ಶಕ್ತಿ, ಆ ಶಕ್ತಿಯನ್ನು ಇವರಿಬ್ಬರು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಸಚಿವರು ಶ್ಲಾಘಿಸಿದರು. 

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಏಕಗವಾಕ್ಷಿ ಯೋಜನೆಯ ಕಾನೂನು ತೊಡಕನ್ನು ಸರಿಪಡಿಸುವ ಸಂಬಂಧ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದೇ ವೇಳೆ  ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ 2021, 2022, 2023 ಮತ್ತು 2024 ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಸಾಹಿತಿ ಅರವಿಂದ್ ಮಾಲಗತ್ತಿ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ.ಮಾನಸಾ, ಇಲಾಖೆ ನಿರ್ದೇಶಕಿ ಕೆ. ಎಂ. ಗಾಯತ್ರಿ, ಪ್ರಾಧಿಕಾರದ ಆಡಳಿತಾಧಿಕಾರಿ ಕಿರಣ್ ಸಿಂಗ್ ಹಾಗೂ ಇತರರ ಉಪಸ್ಥಿತರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist