ಪ್ರಧಾನಿ ಮೋದಿ ಆಧುನಿಕ ಪ್ರಪಂಚದ ಕಾಯಕಯೋಗಿ ಬಸವಣ್ಣ:ವಿ.ಸೋಮಣ್ಣ ಬಣ್ಣನೆ..!

RELATED POSTS

ನವದೆಹಲಿ(www.thenewzmirror.com):  ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು, ಆಧುನಿಕ ಪ್ರಪಂಚದ ಕಾಯಕಯೋಗಿ ಬಸವಣ್ಣ ನಮ್ಮ ಪ್ರಧಾನಿಗಳು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. 

ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣನವರು, ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಬಸವೇಶ್ವರರು ಎಂದಿದ್ದಾರೆ.

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ಥರಗಳು ಆ ಚಳುವಳಿಯ ಒಂದು ಭಾಗವಾದ್ದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ. ಬಸವಣ್ಣನವರು ವಿದ್ಯೆಯೆಂಬ ಆಯುಧವನ್ನು ಸಮಾಜದ ಎಲ್ಲಾ ವರ್ಗದ ಹಿಂದುಳಿದವರ, ಶೋಷಿತ ವರ್ಗದ ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ತೊಡಗಿಸಿಕೊಂಡಿದ್ದರು. ಜೀವನದ ಸತ್ಯತೆಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ಬಸವಣ್ಣನವರ ವಚನಗಳು ಬಹು ಮುಖ್ಯ ಪಾತ್ರ ವಹಿಸಿದೆ ಎಂದರು.

ಬಸವಣ್ಣನವರ ಅನುಭವ ಮಂಟಪ ಸಮಾಜದ ಎಲ್ಲಾ ವರ್ಗಗಳ ಪ್ರತಿನಿಧಿತ್ವದೊಂದಿಗೆ ಲಿಂಗಬೇದ ರಹಿತ ಸಮಾನತೆಯೊಂದಿಗೆ ಅಭಿವ್ಯಕ್ತಿ ಸ್ವಾತಂತ್ಯದ ವೇದಿಕೆಯಾಗಿತ್ತು. ಅನುಭವ ಮಂಟಪದ ಆ ವೇದಿಕೆಯೆ ಇಂದಿನ ನಮ್ಮ ಮುಂದಿರುವ ಸಂಸತ್ತು ಎಂದು ವಿ. ಸೋಮಣ್ಣ ಪುನರುಚ್ಚರಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ಮ್ಯಾಗ್ನಾ ಕಾರ್ಟರ ಪರಿಕಲ್ಪನೆಯ ಸಂಸತ್ತು ಜಾರಿಗೆ ಬರುವ ಮೊದಲೇ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಸವಣ್ಣನವರು ಸಂಸತ್ತಿನ ಪರಿಕಲ್ಪನೆ ಸೃಷ್ಟಿಸಿದ್ದು – ಅನುಭವ ಮಂಟಪ ರೂವಾರಿಯಾಗಿದ್ದರು ಎಂದು ಅನುಭವ ಮಂಟಪದ ಹಿರಿಮೆ ಗರಿಮೆಯನ್ನು ಇಂದು ಸೋಮಣ್ಣ ಸಂಸತ್ತಿನಲ್ಲಿ ಆವರಣದಲ್ಲಿ ಕೊಂಡಾಡಿದ್ದಾರೆ. 

ಬಸವಣ್ಣನವರ ಕಾಯಕ ತತ್ವದ ಪ್ರತಿಪಾದನೆಯಲ್ಲಿಯೇ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಈ ದೇಶವನ್ನು ಮುನ್ನೆಡಿಸುತ್ತಿದ್ದಾರೆ. ಬಸವಣ್ಣನವರು 12ನೇ ಶತಮಾನದಲ್ಲಿ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ – ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ ಎಂಬ ಸೂತ್ರವನ್ನು ಜಗಜ್ಯೋತಿ ಬಸವಣ್ಣನವರು ಜಗತ್ತಿಗೆ ಪರಿಚಯಿಸಿದ್ರು.  ಇಂದು 21ನೇ ಶತಮಾನದಲ್ಲಿ ಇದೇ ತತ್ವದಡಿಯಲ್ಲಿ ಕಾಯಕ ಮಾಡುತ್ತಿದ್ದಾರೆ ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. 

ಭಾರತ ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲ ರಾಷ್ಟ್ರವಾಗಬೇಕೆಂಬ ಹಂಬಲದಿಂದ ಸಬ್ಕಾ ಸಾಥ್,  ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್,  ಎಂಬ ಧ್ಯೇಯ ಮಂತ್ರದೊಂದಿಗೆ ಪ್ರಧಾನಿ ಮೋದಿಯವರು  ಈ ದೇಶವನ್ನು ಮುನ್ನೇಡುಸುತ್ತಿದ್ದಾರೆ ಮೋದಿಯವರು ಆಧುನಿಕ ಭಾರತದ “ಕಾಯಕಯೋಗಿ ಬಸವಣ್ಣ” ಎಂದರೆ ತಪ್ಪಾಗಲಾರದು ಎಂದರು.

ಜಗಜ್ಯೋತಿ ಬಸವಣ್ಣನವರ 894ನೇ ಜಯಂತಿಯನ್ನು  ಸಂಸತ್ತಿನ ಆವರಣದಲ್ಲಿ ಅಚರಿಸಲು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಅನುಮತಿಯನ್ನು ನೀಡಿದ್ದಾರೆ. ಬಸವಮೂರ್ತಿ ಸಂಸತ್ತಿನ ಆವರಣದಲ್ಲಿ ಸ್ಥಾಪನೆಯಾಗಿ ಸುಮಾರು 22 ವರ್ಷಗಳ ನಂತರ ಇಂತಹ ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸಿಲು ಅವಕಾಶ ಸಿಕ್ಕಿದೆ. ಇದು ಕನ್ನಡ ನಾಡಿನ ಸಮಸ್ತ ಜನತೆಗೆ ಸಂಸತ್ತಿನ ಮುಖೇನ ಭಾರತ ಸರ್ಕಾರ ನೀಡಿದ ಮಹಾ ಗೌರವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist