ಬೆಂಗಳೂರು(www.thenewzmirror.com): ಕೇಂದ್ರ ಲೋಕಸೇವಾ ಆಯೋಗದ ಭಾರತೀಯ ಅರಣ್ಯ ಸೇವೆ (ಐ.ಎಫ್.ಎಸ್.,) ಪರೀಕ್ಷೆಯಲ್ಲಿ 41 ನೇ ರ್ಯಾಂಕ್ ಪಡೆದು ಭಾರತದ ಅರಣ್ಯ ಸೇವೆಗೆ ಆಯ್ಕೆಯಾಗಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕ ಕಂ ನಿರ್ವಾಹಕ ಬಸಪ್ಪ ಅವರ ಪುತ್ರ ಆನಂದ್ ಅವರನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಭಿನಂದಿಸಿದ್ದು,ದೇಶಕ್ಕಾಗಿ ಒಳ್ಳೆಯ ಕೆಲಸವನ್ನು ಮಾಡಿ ರಾಜ್ಯಕ್ಕೆ ಕೀರ್ತಿ ಇರಲಿ ಎಂದು ಆಶಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸಪ್ಪ ಸಂಖ್ಯೆ 189 ಮತ್ತು ತಾಯಿ ನಾಗರತ್ನ ರವರ ಮಗನಾದ ಆನಂದಕುಮಾರ ರವರು ಭಾರತ ಸರ್ಕಾರದ ಕೇಂದ್ರ ಲೋಕಸೇವಾ ಆಯೋಗದ ಭಾರತೀಯ ಅರಣ್ಯ ಸೇವೆ (ಐ.ಎಫ್.ಎಸ್.,) ಪರೀಕ್ಷೆಯಲ್ಲಿ 41 ನೇ ರ್ಯಾಂಕ್ ಪಡೆದು ಭಾರತದ ಅರಣ್ಯ ಸೇವೆಗೆ ಆಯ್ಕೆಯಾಗಿರುತ್ತಾರೆ. ಅವರ ಈ ಸಾಧನೆಯು ಕುಟುಂಬಕ್ಕೂ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೂ ಕೀರ್ತಿ ತಂದಿದೆ.
ಬೆಂಗಳೂರಿನ ಕೋರಮಂಗಲದಲ್ಲಿರುವ ಗೃಹ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಆನಂದಕುಮಾರ ರವರಿಗೆ ರೂ. 1 ಲಕ್ಷ ಪ್ರೋತ್ಸಾಹ ಧನ ದೊಂದಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು, ನಮ್ಮ ಸಾರಿಗೆ ಸಿಬ್ಬಂದಿಗಳ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್, ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರ ಮಕ್ಕಳಿಗಾಗಿ ಸಾರಿಗೆ ವಿದ್ಯಾ ಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ಐದರಿಂದ ಹತ್ತು ಪಟ್ಟು ಹೆಚ್ಚಳ ಮಾಡಿ ಪ್ರೋತ್ಸಾಹಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸುವಂತಾಗಲಿ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಆನಂದ್ ಕುಮಾರ್,ರವರು ಭಾರತೀಯ ಆಡಳಿತ ಸೇವೆ(IAS) ಅಥವಾ ಭಾರತೀಯ ವಿದೇಶಾಂಗ ಸೇವೆ ( IFS) ಗೆ ತಯಾರಿ ನಡೆಸಲು ತಿಳಿಸಿದರು. ದೇಶಕ್ಕಾಗಿ ಒಳ್ಳೆಯ ಕೆಲಸವನ್ನು ಮಾಡಿ ರಾಜ್ಯಕ್ಕೆ ಕೀರ್ತಿ ಇರಲಿ ಎಂದು ಸಚಿವರು ಆಶಿಸಿದರು.
ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ,ಕ ಆ ಸೇ( ಹಿರಿಯ ಅಯ್ಕೆ ಶ್ರೇಣಿ), ರಾಯಚೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ, ಚಂದ್ರಶೇಖರ ಎಂ. ಎಸ್., ಆನಂದ್ ಕುಮಾರ್ ರವರ ಪರಿವಾರದವರು ಹಾಗೂ ಇನ್ನಿತರೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಆನಂದ ಕುಮಾರ ರವರು ಪದವಿಯನ್ನು ಬಿ.ಎಸ್ಸಿ (ಅಗ್ರಿ) – ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿ, ಯು.ಪಿ.ಎಸ್.ಸಿ – ಐ.ಎಫ್.ಎಸ್. ನಲ್ಲಿ 41 ನೇ ರ್ಯಾಂಕ್ ನೊಂದಿಗೆ ತಮ್ಮ03 ನೇ ಪ್ರಯತ್ನದಲ್ಲಿ ಯಶಸ್ಸು ಪಡೆದಿರುತ್ತಾರೆ.