ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಯ್ಕೆ:ನೇಮಕಾತಿ ಪತ್ರ ವಿತರಿಸಿದ ರಾಮಲಿಂಗಾರೆಡ್ಡಿ

RELATED POSTS

ಬೆಂಗಳೂರು(www.thenewzmirror.com):ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದು, ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಅನಾವರಣಗೊಳಿಸಿದರು.

ಕ.ರಾ.ರ.ಸಾ. ಸಂಸ್ಥೆಯ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿದರು. ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣಗೊಳಿಸಿದರು. 

ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿ ಮಾತನಾಡಿದ ರಾಮಲಿಂಗಾರೆಡ್ಡಿ ರವರು, 2019 ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ದೇಶದಲ್ಲೆಡೆ ಹರಡಿದ ಕೋವಿಡ್-19 ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವಾ.ಕ.ರ.ಸಾ. ಸಂಸ್ಥೆಯಲ್ಲಿ 1000 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ, ಬಹಳ ಯಶಸ್ವಿಯಾಗಿ ಹಾಗೂ ಸಂಪೂರ್ಣ ಪಾರದರ್ಶಕತೆಯಿಂದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಭರಮಗೌಡ ಕಾಗೆ ಮಾತನಾಡಿ, ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಗಳ ಅವಶ್ಯಕತೆ ಇದೆ ಹಾಗಾಗಿ ಮತ್ತೊಮ್ಮೆ ಚಾಲನಾ ಸಿಬ್ಬಂದಿಗಳ ನೇಮಕಾತಿಯನ್ನು ಪ್ರಾರಂಭಿಸಿದರೆ ಪುನಃ ಸಂಸ್ಥೆಗೆ ಖರ್ಚು ವೆಚ್ಚವಾಗುತ್ತದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ ಅದಕ್ಕಾಗಿ ಹೆಚ್ಚುವರಿ ವಿಶೇಷ ಅನುದಾನವನ್ನು ಸರಕಾರದಿಂದ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.   

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಮ್ ಭಾಆಸೇ. ರವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. 

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷರಾದ ಪೀರಸಾಬ್ ಕೌತಾಳ, ಅಕ್ರಂ ಪಾಷಾ,ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕ.ರಾ.ರ.ಸಾ, ಆರ್. ರಾಮಚಂದ್ರನ್,ಭಾಆಸೇ ವ್ಯವಸ್ಥಾಪಕ ನಿರ್ದೇಶಕರು, ಬೆ.ಮ.ನ.ಸಾ, ಪ್ರಿಯಾಂಗಾ ಎಮ್ ಭಾಆಸೇ. ವ್ಯವಸ್ಥಾಪಕ ನಿರ್ದೇಶಕರು, ವಾ.ಕ.ರ.ಸಾ, ಎಮ್. ರಾಚಪ್ಪ, ಕ ಆಸೇ, ವ್ಯವಸ್ಥಾಪಕ ನಿರ್ದೇಶಕರು, ಕ.ಕ.ರ.ಸಾ, ಡಾ. ನಂದಿನಿದೇವಿ ಕೆ ಭಾಆಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಇಬ್ರಾಯಿಮ್ ಮೈಗೂರು ಭಾಆಸೇ, ನಿರ್ದೇಶಕರು (ಮಾಹಿತಿ ಮತ್ತು ತಂತ್ರಜ್ಞಾನ) ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಡ್ರೀಮ್ ಸ್ಟೆಪ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ್ ಸ್ವಾಗತಿಸಿದರು ಹಾಗೂ ಕಾರ್ಯಕ್ರಮವನ್ನುಸುನೀಲ ಪತ್ರಿ ನಿರೂಪಿಸಿದರು. 

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist