ಶಿವಮೊಗ್ಗ(www.thenewzmirror.com):ಶಾಲಾ ವಾಹನಗಳಿಗೆ ಸಂಬಂಧಿಸಿದಂತೆ ಇರುವ ಸುಪ್ರೀಂ ಕೋರ್ಟ್ ಗೈಡ್ ಲೈನ್ಸ್ ಗಳನ್ನು ಪಾಲನೆ ಸೇರಿದಂತೆ ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಬಸ್ ವ್ಯವಸ್ಥೆ ಹೊಂದಿರುವ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಪೊಲೀಸ್ ಇಲಾಖೆ ಸೂಚಿಸಿದೆ.
ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಬಸ್ ವ್ಯವಸ್ಥೆ ಹೊಂದಿರುವ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿವಮೊಗ್ಗ-ಬಿ ಉಪವಿಭಾಗರದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಶಾಲಾ ಆಡಳಿತ ಮಂಡಳಿಗಳು ಪಾಲಿಸಬೇಕಾದ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿವರಿಸಿದರು.
ಶಾಲಾ ವಾಹನಗಳಿಗೆ ಸಂಬಂಧಿಸಿದಂತೆ ಇರುವ ಸುಪ್ರೀಂ ಕೋರ್ಟ್ ಗೈಡ್ ಲೈನ್ಸ್ ಗಳನ್ನು ಪಾಲನೆ ಮಾಡಬೇಕು,ಶಾಲಾ ವಾಹನಕ್ಕೆ ಕಡ್ಡಾಯವಾಗಿ ಸ್ವೀಡ್ ಗರ್ವನರ್ ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು, ಶಾಲಾ ವಾಹನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು, ಶಾಲಾ ವಾಹನದ ನಿಗಧಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಕೆರೆದುಕೊಂಡು ಹೋಗಬಾರದು. ಶಾಲಾ ವಾಹನಗಳಿಗೆ ಕನಿಷ್ಠ 4 ವರ್ಷದ ಅನುಭವವುಳ್ಳ ಚಾಲನಾ ಪರವಾನಿಗೆ* ಹೊಂದಿರುವ ಚಾಲಕರನ್ನು ನೇಮಕಮಾಡಿಕೊಳ್ಳಬೇಕು ಹಾಗು ಶಾಲಾ ಆಡಳಿತ ಮುಖ್ಯ ಸ್ಥರು ಮತ್ತು ಸಂಚಾರ ಪೊಲೀಸ್ ರವರುಗಳನ್ನ ಒಳಗೊಂಡ ಒಂದು ವಾಟಪ್ಸ್ ಗ್ರೂಪ್ ರಚನೆ ಮಾಡುವ ಬಗ್ಗೆ ಮತ್ತು ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲನೆ ಮಾಡುವುದರ ಬಗ್ಗೆ ತಿಳಿಸಿದರು.
ಮಕ್ಕಳಲ್ಲಿ ಸಂಚಾರ ಅರಿವು ಕಾರ್ಯಕ್ರಮ:
ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಎಎಸ್ಐ ಹಾಗೂ ಸಿಬ್ಬಂದಿಯವರು ಶಿವಮೊಗ್ಗ ನಗರದ ವಾಸವಿ ಮತ್ತು ಮಹಾವೀರ ಶಾಲೆಯಲ್ಲಿ, ಸಂಚಾರ ನಿಯಮಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಕುರಿತು ಮಾತನಾಡಿ ಸಂಚಾರ ನಿಯಮ ಪಾಲನೆ ಮಹತ್ವದ ಕುರಿತು ಮಾಹಿತಿ ನೀಡಿದರು.
ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರವರು ಮತ್ತು ಅಂತೋಣಿ ಎ.ಎಸ್.ಐ. ಸಿಬ್ಬಂದಿಯವರಾದ ಪ್ರಶಾಂತ್, ಮಂಜುನಾಥ್, ಸೂರ್ಯ ನಾಯ್ಕ್, ಹರೀಶ್ ನಾಯ್ಕ್, ದಿನೇಶ್, ರವರು ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ರಾಜರಾಜೇಶ್ವರಿ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮದ ಬಗ್ಗೆ ಹಾಗೂ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಸೈಬರ್ ವಂಚನೆಯ ಬಗ್ಗೆ ತಿಳಿಸಿಕೊಟ್ಟರು.