Tejaswi Surya, couple, presents, PM Modi, 750-year-old, Sarvamool, scripture, Madhwacharya,ಪಿಎಂ ಮೋದಿ,ಮಧ್ವಾಚಾರ್ಯ, 750 ವರ್ಷ,ಸರ್ವಮೂಲ,ಗ್ರಂಥ, ತೇಜಸ್ವಿ ಸೂರ್ಯ, ದಂಪತಿ,
ನವದೆಹಲಿ(www.thenewzmirror.com): ಇತ್ತೀಚೆಗಷ್ಟೇ ಮದುವೆಯಾಗಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ & ಶಿವಶ್ರೀ ಸೂರ್ಯ ರವರು ದೇಶದ ಪ್ರಧಾನಿ ನರೇಂದ್ರ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದು,ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ಸಂರಕ್ಷಿತ ʼಸರ್ವಮೂಲʼ ಗ್ರಂಥವನ್ನು ಉಡುಗೊರೆಯಾಗಿ ನೀಡಿದರು.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ನರೇಂದ್ರ ಮೋದಿ ರವರು, ನಮ್ಮ ಮದುವೆ ಸಮಾರಂಭದ ಚಿತ್ರಗಳನ್ನು ಈಗಾಗಲೇ ವೀಕ್ಷಿಸಿರುವುದಾಗಿ ತಿಳಿಸಿದ್ದು ತುಂಬಾ ಖುಷಿಯನ್ನುಂಟುಮಾಡಿದೆ ಅಲ್ಲದೆ ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ಸಂರಕ್ಷಿತ ʼಸರ್ವಮೂಲ ಗ್ರಂಥʼವನ್ನು ಉಡುಗೊರೆಯಾಗಿ ನೀಡಿದ್ದು, ಅತ್ಯಂತ ಪುರಾತನವಾಗಿರುವ ಈ ಗ್ರಂಥವನ್ನು ನೂತನ ತಂತ್ರಜ್ಞಾನದ ಮೂಲಕ ಸಂರಕ್ಷಿಸಲಾಗಿದ್ದು, ಇವುಗಳು ವಾಟರ್ ಪ್ರೂಫ್ , ಫೈರ್ ಪ್ರೂಫ್ ತಂತ್ರಜ್ಞಾನವನ್ನು ಒಳಗೊಂಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿ ರವರಿಗೆ ವಿವರಿಸಿದ್ದಾಗಿ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎನ್.ಜಿ.ಓ ತಾರಾ ಪ್ರಕಾಶನದಿಂದ ಈ ಗ್ರಂಥವನ್ನು ಸಂರಕ್ಷಿಸಲಾಗಿದ್ದು, ತಾಳೆಗರಿ ಮತ್ತು ಪುರಾತನ ಹಸ್ತಪ್ರತಿಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯದಲ್ಲಿ ಈ ಸಂಸ್ಥೆ ತೊಡಗಿಸಿಕೊಂಡಿದೆ. ಸಂರಕ್ಷಣಾ ವಿಧಾನವನ್ನು ವಿಧೇಯ ವಿದ್ಯಾರ್ಥಿಯಂತೆ ಕೇಳಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ರವರು, ನಮ್ಮ ಪೂರ್ವಜರ ಜ್ಞಾನ, ಸಂಸ್ಕೃತಿ ಉಳಿಸುವಿಕೆ ನಿಟ್ಟಿನಲ್ಲಿ, ಜ್ಞಾನ ಭಾರತಿ ಮಿಶನ್ ಅನ್ನು ಆರಂಭಿಸಲಾಗಿದ್ದು, ಇದಕ್ಕೆ ಬಜೆಟ್ ನಲ್ಲಿ ಅನುದಾನ ಕೂಡ ಒದಗಿಸಿದ್ದು ಶ್ಲಾಘನೀಯ ಎಂದರು.
ತಾರಾ ಪ್ರಕಾಶನದ ಕುರಿತು :
ಈ ಸಂಸ್ಥೆಯು 2006 ರಲ್ಲಿ ವೇದಗಳಲ್ಲಿನ ಜ್ಞಾನ ಸಂರಕ್ಷಣೆ, ಪಸರಿಸುವ ನಿಟ್ಟಿನಲ್ಲಿ ಪ್ರಾರಂಭಗೊಂಡಿದೆ. ಕಳೆದ 18 ವರ್ಷಗಳಲ್ಲಿ ಸಂಸ್ಥೆಯು, ನೂತನ ತಂತ್ರಜ್ಞಾನದ ಸಹಾಯದೊಂದಿಗೆ ಪುರಾತನ ಹಸ್ತಪ್ರತಿ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದೆ. ತಾಳೆಗರಿ ಗಳಲ್ಲಿನ ಬರಹಗಳನ್ನು ಡಿಕೋಡ್ ಮಾಡುವ, ಮುಂದಿನ ಹಲವಾರು ವರ್ಷಗಳ ವರೆಗೆ ನಾಶವಾಗದ ರೀತಿಯಲ್ಲಿ ವಿನ್ಯಾಸಗೊಳಿಸುವ ಕಾರ್ಯವನ್ನು ಸಂಸ್ಥೆಯು ಮಾಡುತ್ತಿದೆ.ಅಮೆರಿಕದ ರೋಚೆಸ್ಟರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಪ್ರೊಫೆಸರ್ ಆಗಿರುವ , ಪಿ ಆರ್ ಮುಕುಂದ್ ರವರಿಂದ ತಾರಾ ಪ್ರಕಾಶನವು ಸ್ಥಾಪಿತವಾಗಿದ್ದು, ಆಧ್ಯಾತ್ಮಿಕತೆ & ವಿಜ್ಞಾನಗಳ ಸಂಬಂಧಗಳ ಕುರಿತಾಗಿ ಹಲವು ಪುಸ್ತಕಗಳನ್ನು ಕೂಡ ಇವರು ಬರೆದಿದ್ದು ಗಮನಾರ್ಹ.