ಬೆಂಗಳೂರು, (www.thenewzmirror);
ಈಗಾಗಲೇ ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿಯಾಗಿದೆ. ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದ್ದಲ್ಲದೇ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆನೂ ವಿಧಿಸಿದೆ.
ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈಗಾಗಲೇ ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಆದ್ರೆ, ಸಿಬಿಐ ವಿಶೇಷ ಕೋರ್ಟ್ , ರೆಡ್ಡಿ ಮನವಿಯನ್ನು ತಿರಸ್ಕಾರ ಮಾಡಿದ್ದು ಎಲ್ಲದೂ ಗೊತ್ತೇ ಇದೆ.
ಜನಾರ್ಧನ ರೆಡ್ಡಿ ಜೈಲು ಸೇರ್ತಾ ಇದ್ದಂತೆ ಜನಾರ್ದನ ರೆಡ್ಡಿ ಬೆಂಬಲಿಗರು ಸಭೆ ನಡೆಸಿ, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾರ್ತಕರ್ತರಿಗೆ ಸ್ವತಃ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಧೈರ್ಯ ತುಂಬ ಕೆಲ್ಸ ಮಾಡ್ತಿದ್ದಾರೆ.
ಜನಾರ್ದನ ರೆಡ್ಡಿ ಯಾರಿಗೂ ಏನೂ ಅನ್ಯಾಯ ಮಾಡಿಲ್ಲ, ಸಾರ್ವಜನಿಕ ಜೀವನದಲ್ಲಿ ಎಲ್ಲರಿಗೂ ನ್ಯಾಯ ಒದಗಿಸಿದ್ದಾರೆ. ನಮಗೆ ದೇವರ ಮೇಲೆ ನಂಬಿಕೆ ಇದೆ. ಅವರು ಆದಷ್ಟು ಬೇಗ ಎಲ್ಲ ಕಳಂಕಗಳಿಂದ ಹೊರಬರುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ಹೇಳಿವ ಮೂಲಕ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ.
ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಇದೀಗ ಪತಿಯ ಒಳಿತಿಗಾಗಿ ಟೆಂಪಲ್ ರನ್ ಮಾಡ್ತಿದ್ದಾರೆ.
ಪತಿಗೆ ಕಷ್ಟಗಳ ಮೇಲೆ ಕಷ್ಟ ಬರ್ತಿರೋದ್ರಿಂದ ಆ ಎಲ್ಲಾ ಸಂಕಷ್ಟಗಳಿಂದ ಪತಿಯನ್ನ ಪಾರು ಮಾಡುವಂತೆ ಶಕ್ತಿ ದೇವತೆಗಳ ಮೊರೆ ಹೋಗ್ತಿರೋ ಪತ್ನಿ ಲಕ್ಷ್ಮೀ ಅರುಣಾ, ವಿಶೇಷ ಪೂಜೆ ಹೋಮ ಹವನಗಳನ್ನ ಮಾಡಿಸುತ್ತಿದ್ದಾರೆ.
ಪ್ರತಿಷ್ಠಿತ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ಬ್ರಹ್ಮಲಿಂಗೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನು ಮಾಡಿ ದೇವರಲ್ಲಿ ಪ್ರಾರ್ಥಿಸಿ ಪತಿಯ ಒಳಿತಿಗಾಗಿ ಬೇಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ರಾಜಕೀಯ ಪಿತೂರಿಯಿಂದ ಪತಿ ಜೈಲು ಪಾಲಾಗಿದ್ದು ಶೀಘ್ರವೇ ಬಿಡುಗಡೆಗಾಗಿ ಬೇಡಿಕೊಂಡಿದ್ದಾರೆ.
ಈಗಾಗಲೇ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿ ಬಿಡುಗಡೆಯಾದ ಬಳಿಕೆ ರಾಜಕೀಯದಲ್ಲಿ ಚೇತರಿಸಿಕೊಳ್ಳುತ್ತಿದ್ದರು. ಇದರ ಬೆನ್ನಲ್ಲೇ ಮತ್ತೆ ಸಂಕಷ್ಟ ಎದುರಾಗಿದ್ದು ರಾಜಕೀಯವಾಗಿ ಭಾರೀ ಹೊಡೆತ ಕೊಟ್ಟಿದೆ.