ನಾಳೆ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ:ಇಡೀ ದಿನ ಸಂಭ್ರಮಾಚರಣೆ

RELATED POSTS

ಬೆಂಗಳೂರು(www.thenewzmirror.com):ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದ್ದು, ರಾಜ್ಯಮಟ್ಟದ ಕಾರ್ಯಕ್ರಮವನ್ನು ಡಾ. ಬಾಬು ಜಗಜೀವನ್ ರಾಂ ಭವನ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಮಟ್ಟದ ಕಾರ್ಯಕ್ರಮವನ್ನು ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. 

7 ಸ್ಥಳಗಳಿಂದ ಪುರ ಜ್ಯೋತಿಗಳು:

ಕೆಂಪೇಗೌಡರ ಜಯಂತಿಯ ದಿನದಂದು ಬೆಳಗ್ಗೆ 7.00 ಗಂಟೆಗೆ ನಗರದ ನಾಲ್ಕು ದಿಕ್ಕುಗಳಾದ ಲಾಲ್ ಬಾಗ್, ಮೇಕ್ರಿ ವೃತ್ತ, ಕೆಂಪಾಂಬುದಿ ಕೆರೆ ಹಾಗೂ ಹಲಸೂರು  ಗಡಿ ಗೋಪುರಗಳಿಂದ ಹಾಗೂ 3 ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲ್ಲೂಕಿನ ಕೆಂಪಾಪುರ, ದೇವನಹಳ್ಳಿ ತಾಲ್ಲೂಕಿನ ಆವತಿ ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಸೇರಿದಂತೆ ಒಟ್ಟು 7 ಸ್ಥಳಗಳಿಂದ ಸಚಿವರುಗಳ ನೇತೃತ್ವದಲ್ಲಿ ಪುರ ಜ್ಯೋತಿಗಳ ಮೆರವಣಿಗೆ ಹೊರಟು, ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ 7 ಪುರ ಜ್ಯೋತಿಗಳನ್ನು ಸ್ವೀಕರಿಸಲಾಗುತ್ತದೆ.

ಪ್ರತಿಮೆಗಳಿಗೆ ಪುಷ್ಪ ನಮನ:

ಬೆಳಗ್ಗೆ 9.00ಕ್ಕೆ:ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಹತ್ತಿರ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ

ಬೆಳಗ್ಗೆ 10.30ಕ್ಕೆ: ಬಿಬಿಎಂಪಿ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಮತ್ತು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆ

ಬೆಳಗ್ಗೆ 11.11ಕ್ಕೆ: ವಿಧಾನ ಸೌಧ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆ 

ಕೆಂಪೇಗೌಡ ಭವನ ನಿರ್ಮಾಣದ ಶಂಕುಸ್ಥಾಪನೆ:

ಬೆಂಗಳೂರು ನಗರ ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ ಬೆಳಗ್ಗೆ 12.15 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ. 

ರಾಜ್ಯ ಮಟ್ಟದ ಕಾರ್ಯಕ್ರಮ:

ಸುಮ್ಮನಹಳ್ಳಿ ಬಳಿಯಿರುವ ಡಾ. ಬಾಬು ಜಗಜೀವನ್ ರಾಂ ಭವನದಲ್ಲಿ ರಾಜ್ಯಮಟ್ಟದ ವೇದಿಕೆ ಕಾರ್ಯಕ್ರಮವು ಅಪರಾಹ್ನ 12.30ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಮಠಾಧೀಶರುಗಳು, ಸಚಿವರುಗಳು ಹಾಗೂ ಇನ್ನಿತರೆ ಗಣ್ಯರುಗಳು ಕಾರ್ಯಕ್ರಮಕ್ಕೆ‌ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 

ಬಿಬಿಎಂಪಿ ಮಟ್ಟದ ಕಾರ್ಯಕ್ರಮ:

ಬಿಬಿಎಂಪಿ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮವು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಯಲಿದ್ದು, ಉಪ ಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರುಗಳು ಹಾಗೂ ಇನ್ನಿತರೆ ಗಣ್ಯರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಸಂಜೆ 6.00 ಗಂಟೆಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಉತ್ತಮ ಅಧಿಕಾರಿ ನೌಕಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist